ವಿಜಯ್ ಗುಂಟ್ರಾಳ ಗಡಿಪಾರಿಗೆ ಒತ್ತಾಯ

 

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರನ್ನು ಹಾದಿ ತಪ್ಪಿಸುತ್ತಿರುವ ಹು-ಧಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವಿಜಯ್ ಗುಂಟ್ರಾಳ ಅವರನ್ನು ಕೂಡಲೇ ಧಾರವಾಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಪೌರಕಾರ್ಮಿರ ಸಂಘದಿಂದ ಪ್ರತಿಭಟಿಸಲಾಯಿತು.
ಹುಬ್ಬಳ್ಳಿ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯ್ ಗುಂಟ್ರಾಳ ಅವರು ಕಳೆದ ಜೂನ್ 25 ರಂದು ವಿವಿಧ ಬೇಡಿಕೆಗಳಿಗ ಆಗ್ರಹಿಸಿ ಕೈಗೊಂಡಿದ್ದ ಗುತ್ತಿಗೆ ಪೌರ ಕಾರ್ಮಿಕರಿಗೆ ಮೈ ಮೇಲೆ ಮಲ‌ಸುರಿದುಕೊಂಡು ಪ್ರತಿಭಟಿಸುವಂತೆ ಪ್ರೇರಣೆ ನೀಡುವ ಮೂಲಕ ಇಡೀ ಮಾನವ ಕುಲವೇ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಗುತ್ತಿಗೆ ಪೌರ ಕಾರ್ಮಿಕರನ್ನು ಮುಂದಿಟ್ಟುಕೊಂಡು ಪಾಲಿಕೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ರಾಜಕೀಯವಾಗಿ‌ ಮತ್ತು ವೈಯಕ್ತಿಕವಾಗಿ ಬೆಳೆಯುವ ಉದ್ದೇಶದಿಂದ ಅಮಾಯಕ ಗುತ್ತಿಗೆ ಪೌರ ಕಾರ್ಮಿಕರನ್ನು ಬಲಿಪಶು ಮಾಡುತ್ತಿರುವ ಗುಂಟ್ರಾಳ ಅವರ ಸಂಘವನ್ನು ರದ್ದುಪಡಿಸಿ ಕಾನೂನು ಕ್ರಮ ತಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಕೂಡಲೇ ಅವರ ಮೇಲೆ ಕ್ರಮ ಕೈಗೊಳ್ಳದಿದ್ರೆ ಉಗ್ರ ಹೋರಾಟ ನಡೆಸುವ ಎಚ್ವರಿಕೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ