ಕರುಣಾನಿಧಿ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ

ಬೆಂಗಳೂರು, ಆಗಸ್ಟ್ 07, 2018- ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಅಗ್ರಗಣ್ಯ ನಾಯಕ ಎಂ.ಕರುಣಾನಿಧಿ ಅವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್ ವಿ ದೇಶಪಾಂಡೆ ಕಂಬನಿ ಮಿಡಿದಿದ್ದಾರೆ.

ಕರುಣಾನಿಧಿಯವರು ತಮಿಳುನಾಡಿನ ಸಮಕಾಲೀನ ರಾಜಕೀಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರಿಂದಾಗಿ ಸಮಾಜದ ಕೆಳವರ್ಗಗಳಿಗೆ ರಾಜಕೀಯ ದನಿ ಪ್ರಾಪ್ತವಾಯಿತು. ತಮಿಳುನಾಡಿನ ಅಸ್ಮಿತೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ರಾಷ್ಟ್ರ ರಾಜಕಾರಣದಲ್ಲೂ ಹಲವು ಸಂದರ್ಭಗಳಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು” ಎಂದು ಸಚಿವರು ಸ್ಮರಿಸಿಕೊಂಡಿದ್ದಾರೆ.

ಕರ್ನಾಟಕದೊಂದಿಗೆ ಸೌಹಾರ್ದ ಸಂಬಂಧ ಹೊಂದುವುದು ಅಗತ್ಯವೆಂದು ತಿಳಿದಿದ್ದ ಕರುಣಾನಿಧಿಯವರು ಹಲವು ವಿವಾದಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುವ ಒಲವು ಹೊಂದಿದ್ದರು. ಅವರ ನಿಧನದಿಂದಾಗಿ ಮುತ್ಸದ್ದಿಯೊಬ್ಬರು ನಿರ್ಗಮಿಸಿದಂತಾಗಿದೆ. ರಾಷ್ಟ್ರ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳ ಶಕ್ತಿ ಏನೆಂಬುದನ್ನು ಕರುಣಾನಿಧಿಯವರು ತೋರಿಸಿ ಕೊಟ್ಟಿದ್ದರು. ಇದಕ್ಕಾಗಿ ಅವರು ಎಂದೆಂದೂ ನೆನಪಿನಲ್ಲಿ ಉಳಿಯುತ್ತಾರೆ,” ಎಂದು ದೇಶಪಾಂಡೆಯವರು ಅಗಲಿದ ನಾಯಕನ ವ್ಯಕ್ತಿತ್ವವನ್ನು ನೆನಪಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ