ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ವಿವಾಹಿತ ವ್ಯಕ್ತಿಯೊಬ್ಬನನ್ನು ಪೆÇೀಕ್ಸೊ ಕಾಯ್ದೆಯಡಿ ಪೆÇಲೀಸರು ಬಂಧನ

ಚಿಕ್ಕಮಗಳೂರು,ಆ.8- ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ವಿವಾಹಿತ ವ್ಯಕ್ತಿಯೊಬ್ಬನನ್ನು ಪೆÇೀಕ್ಸೊ ಕಾಯ್ದೆಯಡಿ ಪೆÇಲೀಸರು ಬಂಧಿಸಿದ್ದಾರೆ.
ಮೂಲತಃ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ನಿವಾಸಿ ದಯಾನಾಯಕ್ ಬಂಧಿತ ಆರೋಪಿ.
ಮೂಡಗೆರೆ ತಾಲ್ಲೂಕಿನ ಗೋಣಿಬೀಡು ಕಾಫಿ ತೋಟಕ್ಕೆ ಆರೋಪಿ ದಯಾನಾಯಕ್ ಪತ್ನಿ ಹಾಗೂ ಮಕ್ಕಳೊಂದಿಗೆ ತೋಟದ ಕೆಲಸಕ್ಕೆ ಬಂದಿದ್ದನು.
ತೋಟದಲ್ಲಿ ನಿರ್ಮಿಸಿರುವ ಕೂಲಿ ಲೇನ್‍ನಲ್ಲಿ ಈತನ ಕುಟುಂಬ ವಾಸವಾಗಿತ್ತು. ಇಲ್ಲಿ ಪರಿಚಯವಾಗಿದ್ದ ಬಾಲಕಿಗೆ ಪುಸಲಾಯಿಸಿ ದಯಾನಾಯಕ್ ಆಕೆ ಮೇಲೆ ಅತ್ಯಾಚಾರ ವೆಸಗಿ ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದನು.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಪೆÇೀಷಕರು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಬಾಲಕಿ ಪೆÇೀಷಕರು ಗೋಣಿಬೀಡು ಪೆÇಲೀಸರಿಗೆ ದೂರು ನೀಡಿದ್ದು, ಪೆÇೀಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೆÇಲೀಸರು ಆರೋಪಿಗಾಗಿ ಶೋಧ ಕೈಗೊಂಡಿದ್ದರು.
ಆರೋಪಿ ದಯಾನಾಯಕ್ ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿಯ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಮಾಹಿತಿ ಕಲೆ ಹಾಕಿದ ಪೆÇಲೀಸರು ಅಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿ, ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ