ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಯಿಂದ ಕರುಣಾನಿಧಿ ಅವರ ಅಂತಿಮ ದರ್ಶನ

 

ಬೆಂಗಳೂರು,ಆ.8- ನಿನ್ನೆ ಸಂಜೆ ನಿಧನರಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಡೆದರು.
ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಸೆಲ್ವ ಕುಮಾರ್ ಸೇರಿದಂತೆ ಅಧಿಕಾರಿಗಳ ತಂಡದೊಂದಿಗೆ ಇಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು ಚೆನ್ನೈಗೆ ತೆರಳಿದರು.
ಚೆನ್ನೈನಲ್ಲಿ ಕರುಣಾನಿಧಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರಾಜ್ಯ ಸರ್ಕಾರದ ಪರವಾಗಿ ಗೌರವ ಸಲ್ಲಿಸಿದರು. ನಂತರ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ಸಾದಾರು.
ರಾಜಭವ£ದಲ್ಲಿ À ಆ.16ರಿಂದ 31ರವರೆಗೆ ಮುಕ್ತ ಪ್ರವೇಶ
ಬೆಂಗಳೂರು, ಆ.8- ಬೆಂಗಳೂರಿನ ರಾಜಭವನ ಆ.16ರಿಂದ 31ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಲಿದೆ. ದೆಹಲಿ ರಾಷ್ಟ್ರಪತಿ ಭವನ ಮಾದರಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಜನರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.
ಜನಸಾಮಾನ್ಯರ ರಾಜ್ಯಪಾಲರು ಎಂಬ ಖ್ಯಾತಿಗೆ ಪಾತ್ರರಾಗಿದ್ದ ವಿ.ಎಸ್. ರಮಾದೇವಿ ಅಧಿಕಾರಾವಧಿ ನಂತರ ಜನಸಾಮಾನ್ಯರಿಗೆ ರಾಜಭವನ ಪ್ರವೇಶಿಸಲು ಅನುಮತಿ ಇರಲಿಲ್ಲ. ಇತ್ತೀಚಿನ ದಿನಗಳಲ್ಲಿ ಆಹ್ವಾನಿತ ಗಣ್ಯರು ಮತ್ತು ಅತಿಥಿಗಣ್ಯರಿಗೆ ಮಾತ್ರ ಸೀಮಿತವಾಗಿತ್ತು. ಇದೀಗ ಮತ್ತೊಮ್ಮೆ ಸಾರ್ವಜನಿಕರಿಗೆ ರಾಜಭವನ ತೆರೆದುಕೊಳ್ಳಲಿದೆ.
ಆಗಸ್ಟ್ 16ರಿಂದ 31ರವರೆಗೆ ರಾಜಭವನ ವೀಕ್ಷಿಸಲು ಬಯಸುವವರು ಮುಕ್ತವಾಗಿ ತೆರಳಬಹುದಾಗಿದೆ.ಆದರೆ ಸಾರ್ವಜನಿಕರ ಪ್ರವೇಶಕ್ಕೆ ಕೆಲವು ನಿಯಮ ಹಾಗೂ ಷರತ್ತುಗಳು ಅನ್ವಯವಾಗಲಿದೆ.
ಮೊಘಲ್ ಉದ್ಯಾನಕ್ಕೆ ಫೆ.6ರಿಂದ ಮುಕ್ತ ಅವಕಾಶ: ಜನರಿಗೆ ಮುಕ್ತ ಅವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸಾರ್ವಜನಿಕರು ರಾಜಭವನದ ಕಟ್ಟಡ, ವಿಶಾಲ ಉದ್ಯಾನ, ಗಾಜಿನ ಮನೆ ಎಲ್ಲವನ್ನೂ ವೀಕ್ಷಿಸಬಹುದಾಗಿದೆ. ಭೇಟಿಗೆ ಕನಿಷ್ಠ ಐದು ದಿನಗಳ ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು. ಒಂದು ತಂಡದಲ್ಲಿ 30 ಜನರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ತಂಡದ ಸುತ್ತಾಟಕ್ಕೆ 30 ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ.
ನಿಗದಿತ ಸಮಯಕ್ಕಿಂತ 15 ನಿಮಿಷ ಮೊದಲು ಬರಬೇಕು, ಗುರುತಿನ ಚೀಟಿ ಹೊಂದಿರಬೇಕು. ಕೈಚೀಲ, ಮೊಬೈಲ್, ಕ್ಯಾಮರಾವನ್ನು ಕೊಂಡೊಯ್ಯುವಂತಿಲ್ಲ ಪ್ರವೇಶ ಉಚಿತವಾಗಿರುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ