ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ಇಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ- ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿ ವಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಸ್ವ ಕ್ಷೇತ್ರ ಬಾಗಲಕೋಟ ಜಿಲ್ಲೆಯ ಬಾದಾಮಿಯಲ್ಲಿ ಆಯೋಜನೆ ಮಾಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ‌ ಅವ್ರು,ಮೈತ್ರಿ ವಿಚಾರ ಜಿಲ್ಲಾ ಮಟ್ಟದ ನಾಯಕರಿಗೆ ಬಿಟ್ಟಿದ್ದು. ಲೋಕಸಭೆ ಮೈತ್ರಿ ವಿಚಾರ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನವಾಗುತ್ತೆ. ಸ್ಥಳೀಯವಾಗಿ ಏನೇನು ಮತ್ತು ಯಾವ ಯಾವ ರೀತಿಯ ಹೊಂದಾಣಿಕೆ ಮಾಡಿಕೊಂಡರೇ ಸುಲಭ ಮತ್ತು ಪಕ್ಷಕ್ಕೆ ಅನುಕೂಲವಾಗುತ್ತದೆ ಎಂಬ ಕುರಿತು ಜಿಲ್ಲಾ ಮಟ್ಟದ ನಾಯಕರಿಗೆ ಜವಾಬ್ದಾರಿ ವಹಿಸಿಕೊಡಲಾಗಿದೆ ಎಂದರು. ಆದ್ರೇ, ಲೋಕಸಭಾ ಚುನಾವಣೆ ಮೈತ್ರಿ ಕುರಿತು ಮಾತನಾಡಿದ ಅವರು, ಬಹುತೇಕ ಲೋಕಸಭೆ ಚುನಾವಣೆಯಲ್ಲಿ ಅಲೈಯನ್ಸ್ ಆಗುತ್ತೆ. ಅವಾಗ ನೋಡೋಣ ಎಂದರು. ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯತೆಯಿಂದ ನಡೆಯಬೇಕು. ಹೀಗಾಗಿ‌ ಕೆಲವೊಂದು ಹೊಂದಾಣಿಕೆ ಅನಿವಾರ್ಯ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ