ಇನ್ನೊಂದು ವಾರದಲ್ಲಿ ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವೂ ಮನ್ನಾ: ಸಿಎಂ ಭರವಸೆ

ಮಂಡ್ಯ: ಆ-11: ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ರೈತರ ಜೊತೆಗೂಡಿ ನಾಟಿಮಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಾಟಿ ಕಾರ್ಯ ಮಾಡಿರುವುದು ನನ್ನ ಜೀವನದ ಸಾರ್ಥಕತೆ ಹಾಗೂ ಪುಣ್ಯ ಎಂದರು.

ಈ ವೇಳೆ ಮಾತನಾಡಿದ ಸಿಎಂ, ಇನ್ನೊಂದು ವಾರದಲ್ಲಿ ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವನ್ನು ಸಹ ಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ತಿಂಗಳಿನಿಂದ ರಾಜ್ಯದ 30 ಜಿಲ್ಲೆಗೂ ಭೇಟಿ ಕೊಡುತ್ತೇನೆ. ತಿಂಗಳಲ್ಲಿ ಒಂದು ದಿನ ರೈತರ ಜೊತೆ ಕೃಷಿ ಚಟುವಟಿಕೆಯಲ್ಲಿ ಭಾಗಯಾಗ್ತೀನಿ ಎಂದ ಅವರು ಯಾರು ಆತ್ಮಹತ್ಯೆಗೆ ಶರಣಾಗಬೇಡಿ, ನಿಮ್ಮ ಜೊತೆ ನಾವಿದ್ದೇವೆ .ಗೌರಿಗಣೇಶ ಹಬ್ಬದಷ್ಟರಲ್ಲಿ ರೈತರಿಗೆ ಒಳ್ಳೆಯ ಕಾರ್ಯಕ್ರಮ ಕೊಡುತ್ತೇನೆ,ಎಂದು ಭರವಸೆ ನೀಡಿದರು.

ರಾಜ್ಯದ ಆರುವರೆ ಕೋಟಿ ಜನರಿಗೂ ಒಳ್ಳೆಯ ಕಾರ್ಯಕ್ರಮ ಕೊಡುತ್ತೇನೆ. ನಾನು ಯಾರನ್ನು ಮೆಚ್ವಿಸುವುದಿಲ್ಲ, ಹೃದಯದಿಂದ ಕಾರ್ಯಕ್ರಮ ಕೊಡುತ್ತೇನೆ ಎಂದರು.

ನಂತರ ಬಿಜೆಪಿಯ ಈಶ್ವರಪ್ಪ ಹೇಳಿಕೆಗೆ ಸಿಎಂ ತಿರುಗೇಟು ನೀಡಿ,ನಾಟಿ ಕಾರ್ಯವನ್ನು ಮಾಡಿ ಸಿಎಂ ಡ್ರಾಮಾ ಮಾಡ್ತಿದ್ದಾರೆಂದು ಹೇಳಿದ್ದಾರೆ ಆದರೆ ನಾನು ನಾಟಕ ಮಾಡಲು ಇಲ್ಲಿಗೆ ಬಂದಿಲ್ಲ, ಡ್ರಾಮಾ ಮಾಡಲು ಬಂದಿಲ್ಲ ಎಂದರು. ಮಂಡ್ಯದಲ್ಲಿ ಪುಣ್ಯಾತ್ಮರು 7 ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲ್ಲಿಸಿದ್ದೀರಿ. ನಿಮ್ಮ ಋಣ ನನ್ನ ಮೇಲಿದೆ, ನಿಮಗಾಗಿ ವಿಧಾನಸೌಧದ ಬಾಗಿಲು ಯಾವಾಗಲು ತೆರೆದಿರುತ್ತದೆ ನಾನು ಒಂದು ಪ್ರಾಂತ್ಯಕ್ಕೆ ಸಿಎಂ ಅಲ್ಲ 30 ಜಿಲ್ಲೆಯ ರೈತರನ್ನ ಉಳಿಸುವುದು ನನ್ನ ಕರ್ತವ್ಯ ಎಂದರು.

ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ, ನನ್ನ ಮೇಲೆ ನಂಬಿಕೆಯಿಡಿ ಸಂಶಯ ಪಡಬೇಡಿ. ನನಗೆ ಸ್ವಲ್ಪ ಸಮಯ ಕೊಡಿ.ನಾನು ಹೆದರೋದು, ಗೌರವ ಕೊಡೋದು ನಿಮಗೆ ಮಾತ್ರ, ಬೇರ್ಯಾರಿಗೂ ಇಲ್ಲ ಎಂದರು.

CM H D Kumaraswamy,Paddy,Mandya,Farmers

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ