ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕುದೂರು ಠಾಣೆ ಪೆÇಲೀಸರು ಆರು ಮಂದಿ ಆರೋಪಿಗಳನ್ನು ಬಂಧನ

 

ಬೆಂಗಳೂರು, ಆ.11- ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕುದೂರು ಠಾಣೆ ಪೆÇಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಎಸ್.ಎ.ಲಾಯಾ ನಿವಾಸಿಗಳಾದ ಗಾಜಾಫೀರ್, ಖಾಸಿಂ, ಸಯ್ಯದ್, ಮುಬಾರಕ್, ಇಂತಿಯಾಜ್ ಮತ್ತು ತಬರೇಜ್ ಬಂಧಿತ ಆರೋಪಿಗಳು. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪೆÇಲೀಸರು ಬಲೆ ಬೀಸಿದ್ದಾರೆ.
ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯ ಎಸ್.ಎ.ಲಾಯಾ ಎಂಬಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದಾರೆ ಎಂಬ ದೂರಿನ ಮೇಲೆ ಪೆÇಲೀಸರು ದಾಳಿ ನಡೆಸಿ, 71 ಸೀಮೆ ಹಸು ಮತ್ತು ಕರುಗಳನ್ನು ವಶಪಡಿಸಿಕೊಂಡಿದ್ದರು. ಈ ಬಗ್ಗೆ 7 ಮಂದಿಯ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದರು.
ದಾಳಿಯ ವೇಳೆ ಅನಿಮಲ್ ವೆಲ್ಫ್ೀರ್ ಬೋರ್ಡ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಇದ್ದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಕೆಲವರು ಹಲ್ಲೆ ನಡೆಸಲು ಮುಂದಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ