ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಸರಗಳ್ಳರು 22ಸಾವಿರ ಬೆಲೆಯ ಚಿನ್ನದ ಸರವನ್ನು ಎಗರಿಸಿ ಪರಾರಿ

 

ಬೆಂಗಳೂರು, ಆ.11-ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಸರಗಳ್ಳರು 22ಸಾವಿರ ಬೆಲೆಯ ಚಿನ್ನದ ಸರವನ್ನು ಎಗರಿಸಿರುವ ಘಟನೆ ಸಂಪಂಗಿರಾಮನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಧಾಮನಗರದ ಶ್ರೀನಿವಾಸಕಾಲೋನಿಯ ಎಸ್‍ಬಿಐ ಮುಂಭಾಗ ನಿನ್ನೆ ಬೆಳಗ್ಗೆ 8ಗಂಟೆಯಲ್ಲಿ ಗಾಯಿತ್ರಿ ಎಂಬುವರು ನಡೆದು ಹೋಗುತ್ತಿದ್ದಾಗ ಬೈಕ್‍ನಲ್ಲಿ ಇಬ್ಬರು ಸರಗಳ್ಳರು ಇವರನ್ನು ಹಿಂಬಾಲಿಸಿ ಸರ ಎಗರಿಸಿದ್ದಾರೆ.
ಮನೆಗಳ್ಳತನ:
ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 150 ಗ್ರಾಂ ಚಿನ್ನದ ಆಭರಣವನ್ನು ಕಳ್ಳತನ ಮಾಡಿರುವ ಘಟನೆ ಸಂಪಂಗಿರಾಮನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಾಗೇಂದ್ರ ಬ್ಲಾಕ್ ನಿವಾಸಿ ಶಶಿಕಲಾ ಎಂಬುವರು ಆ.7ರಂದು ಊರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ ಕೈಗೆ ಸಿಕ್ಕ ಆಭರಣವನ್ನು ಕದ್ದೊಯ್ದಿದ್ದಾರೆ.
ನಿನ್ನೆ ಶಶಿಕಲಾ ಅವರು ಮನೆಗೆ ವಾಪಸ್ಸಾದಾಗಲೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪೆÇಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ