ರೇಣುಕಾ ಸಾವು ಪ್ರಕರಣ : ಆರೋಪಿಗಳ‌ ಬಂಧನಕ್ಕೆ ಒತ್ತಾಯ

ಹುಬ್ಬಳ್ಳಿ- ಹಾವೇರಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ರೇಣುಕಾ ಸಾವು ಪ್ರಕರಣದ ಅರೋಪಿಗಳನ್ನ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ದುರ್ಗದಬೈಲ್ ವೃತ್ತದಲ್ಲಿ ಸೇರಿದ ಬಿಜೆಪಿಯ ನೂರಾರು ಕಾರ್ಯಕರ್ತರು, ರೇಣುಕಾ ಸಾವಿಗೆ ಕಾರಣವಾದ ಕಾಮುಕರನ್ನು ಕೂಡಲೇ ಬಂಧಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವವರೆಗೂ ಹೋರಾಟದ ಕೂಗು ನಿಲ್ಲಲ್ಲ ಎಂದು ಘೋಷಣೆ ಕೂಗಿದರು. ಇದೇ ತಿಂಗಳು ೬ ರಂದು ಅರೆಬೆಂದ ಸ್ಥಿತಿಯಲ್ಲಿ ರೇಣುಕಾ ಶವವಾಗಿ ಪತ್ತೆಯಾಗಿದ್ದಳು. ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ನಡೆಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ