ಲೋಕಸಭೆಗೆ ಸಿ.ಕೆ.ರವಿಚಂದ್ರ ಕಣಕ್ಕಿಳಿಸಲು ತೀರ್ಮಾನ: ಎಂ.ಶ್ರೀನಿವಾಸ್

ಬೆಂಗಳೂರು, ಆ.14-ಈ ಬಾರಿ ಲೋಕಸಭೆಗೆ ಬೆಂಗಳೂರಿನ ಯಾವುದಾದರೊಂದು ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿ ಬದ್ಧತೆ ಹೊಂದಿರುವ ಹೋರಾಟಗಾರರಾದ ಸಿ.ಕೆ.ರವಿಚಂದ್ರ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿರುವುದಾಗಿ ಕರ್ನಾಟಕ ಜನತಾರಂಗದ ಸಂಚಾಲಕ ಎಂ.ಶ್ರೀನಿವಾಸ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವಿಚಂದ್ರ ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ವಿದ್ಯಾರ್ಥಿಗಳು, ಯುವಕರೊಂದಿಗೆ ಸ್ಪಂದಿಸುವ ಮನಸ್ಥಿತಿವುಳ್ಳವರು. ಅಲ್ಲದೆ, ಜಾರ್ಜ್ ಫರ್ನಾಂಡೀಸ್ ಜೊತೆಯಲ್ಲಿ ಸಮತಾಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಬಂಗಾರಪ್ಪ, ರಾಮಕೃಷ್ಣ ಹೆಗಡೆ ಅವರ ಒಡನಾಟ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ರವಿಚಂದ್ರ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿರುವುದಾಗಿ ಹೇಳಿದರು.
ರವಿಚಂದ್ರ ಅವರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸಿ ಅವರ ಗೆಲುವಿಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದ್ದೇವೆ. ರಾಜಕೀಯ ಪಕ್ಷಗಳು ಸಹ ಹೋರಾಟಗಾರರನ್ನು ಬೆಂಬಲಿಸಿ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಬೇಕೆಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ