ರಾಜ್ಯಮಟ್ಟದ ಸಮ್ಮೇಳನ

 

ಬೆಂಗಳೂರು,ಆ.16- ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ದಿ ಸಂಘ ಆ.19ರಂದು ರಾಜ್ಯಮಟ್ಟದ ಸಮ್ಮೇಳನ, ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕಾರಿ ಸಮಿತಿ ಸಭೆಯನ್ನು ರೇಸ್‍ಕೋರ್ಸ್ ರಸ್ತೆಯ ಕೆವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಆಯೋಜಿಸಿರುವುದಾಗಿ ಸಂಘದ ಗೌರವಾಧ್ಯಕಷ ಕೆ.ಶಿವಲಿಂಗಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಎಲ್ಲಾ ಗಂಗಾಮತಸ್ಥ ನೌಕರರು ಭಾಗವಹಿಸಿ ಜನಾಂಗದ ಸರ್ವತೋಮುಖ ಏಳಿಗಾಗಿ ಸಂಘವನ್ನು ಸದೃಢಗೊಳಿಸುವ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
ಹೊಸದಾಗಿ ಆಯ್ಕೆಯಾಗಿರುವ ಜನಾಂಗದ ರಾಜಕೀಯ ಮುಖಂಡರನ್ನು ಸನ್ಮಾನಿಸಲಾಗುವುದು. ಅಲ್ಲದೆ ಉನ್ನತ ಹುದ್ದೆಯಲ್ಲಿರುವ ನಮ್ಮ ಜನಾಂಗದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸುವರು. ಬಾಬುರಾವ್ ಜಾಮದಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ನಾರಾಯಣರಾವ್, ಲಾಲಾಜಿ ಮೆಡನ್,ವಿಧಾನಪರಿಷತ್ ಸದಸ್ಯ ರವಿಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕೆ.ಶಿವಲಿಂಗಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಬಾಬುರಾವ್ ಜಾಮದಾರ್, ಕಾರ್ಯಾಧ್ಯಕ್ಷ ಜಿ.ಶಿವರುದ್ರಪ್ಪ, ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಹಾಲೇಶಪ್ಪ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ