ಮಾಜಿ ಪ್ರಧಾನಿ ಆರೋಗ್ಯ ಮತ್ತಷ್ಟು ಗಂಭೀರ: ಆಸ್ಪತ್ರೆಗೆ ಬರುವಂತೆ ಸಂಬಂಧಿಕರಿಗೆ ಬುಲಾವ್

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಇಂದು ಮತ್ತಷ್ಟು ಗಂಭೀರವಾಗಿದ್ದು, ಸಂಬಂಧಿಕರು ಬುರುವಂತೆ ಆಸ್ಪತ್ರೆಯಿಂದ ಬುಲಾವ್ ನೀಡಲಾಗಿದೆ.
ಈಗಾಗಲೇ ಆಸ್ಪತ್ರೆಗೆ ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಆರೋಗ್ಯ ಸಚಿವ ಜೆ.ಪಿ ನಡ್ವಾ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.
ಇಂದು ದೇಶಾದ್ಯಂತ ಬಿಜೆಪಿಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಪ್ರಧಾನಿ ಕಾರ್ಯಾಲಯ ಪ್ರಕಟಣೆ ಹೊರಡಿಸಿದೆ.
ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ