ಮಾಜಿ ಪ್ರಧಾನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರಾಜ್ಯ ನಾಯಕರು ದೆಹಲಿಗೆ

 

ಬೆಂಗಳೂರು,ಆ.17- ನಿನ್ನೆ ನಿಧನರಾದ ಮಾಜಿ ಪ್ರಧಾನಿ, ಭಾರತ ರತ್ನ ಪ್ರಶಸ್ತಿ ಪುರಸ್ಕøತ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಿಜೆಪಿಯ ರಾಜ್ಯ ನಾಯಕರು ನವದೆಹಲಿಗೆ ದೌಡಾಯಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‍ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ ಸದಾನಂದಾಗೌಡ, ರಮೇಶ್ ಜಿಗಜಿಣಗಿ, ಅನಂತ್‍ಕುಮಾರ್ ಹೆಗ್ಡೆ, ಹಿರಿಯ ಮುಖಂಡರಾದ ಡಿ.ಹೆಚ್,ಶಂಕರಮೂರ್ತಿ, ರಾಮಚಂದ್ರೇಗೌಡ, ಲೋಕಸಭಾ ಸದಸ್ಯರಾದ ಪಿ,ಸಿ ಮೋಹನ್, ಶೋಭಾ ಕರಂದ್ಲಾಜೆ, ಸುರೇಶ್ ಅಂಗಡಿ, ಪ್ರಹ್ಲಾದ್ ಜೋಶಿ, ಕರಡಿ ಸಂಗಣ್ಣ, ಪಿ.ಸಿ.ಗದ್ದೀಗೌಡರ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ತೆರಳಿದ್ದಾರೆ.

ಯಡಿಯೂರಪ್ಪ ಮತ್ತು ಕೆಲವರು ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದರೆ, ಇಂದು ಬೆಳಗ್ಗೆ ಕೆಲ ನಾಯಕರು ರಾಷ್ಟ್ರ ರಾಜಧಾನಿಗೆ ತೆರಳಿ ಆಗಲಿದ ಮಹಾನ್ ನಾಯಕರ ಅಂತಿಮ ದರ್ಶನ ಪಡೆದರು. ಇನ್ನು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಾದ ಅನಂತ್‍ಕುಮಾರ್, ಸದಾನಂದಾಗೌಡ ಮತ್ತಿತರರು ದೆಹಲಿಯಲ್ಲಿಯೇ ಇದ್ದಾರೆ.
ಇನ್ನು ಪಕ್ಷದ ಕಚೇರಿಯಲ್ಲಿ ವಾಜಪೇಯಿ ನಿಧನದ ಹಿನ್ನಲೆಯಲ್ಲಿ ಸಂತಾಪ ಸೂಚಿಸಲಾಯಿತು. ಪಕ್ಷದ ಹಿರಿಯರಾದ ರಾಮಚಂದ್ರೇಗೌಡ, ಶಂಕರಮೂರ್ತಿ, ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಸೇರಿದಂತೆ ಮತ್ತಿತರ ನಾಯಕರು ಆಗಲಿದ ಚೇತನನಿಗೆ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಿದರು.
ಈ ವೇಳೆ ಅಟಲ್ ಬಿಹಾರಿ ವಾಜಪೇಯಿ ಅವರ ನಾಯಕತ್ವ ಹಾಗೂ ಪಕ್ಷ ಕಟ್ಟಲು ನಡೆಸಿದ ಹೋರಾಟವನ್ನು ಸ್ಮರಿಸಲಾಯಿತು. ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ