ವಾಜಪೇಯಿ ಅಂತಿಮ ದರ್ಶನ ಪಡೆದ ದೇವೇಗೌಡ, ಸಿಎಂ ಕುಮಾರಸ್ವಾಮಿ

ಬೆಂಗಳೂರು/ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.
ಅಜಾತಶತ್ರು ವಾಜಪೇಯಿ ಅವರು ದೇಶ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು ಎಂದು ಸ್ಮರಿಸಿದರು. ಇಂದು ಬೆಳಗಿನ ಜಾವ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಅವರು ದೆಹಲಿಗೆ ತೆರಳಿ ವಾಜಪೇಯಿ ಅವರ ಅಂತಿಮ ದರ್ಶನ ಪಡೆದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ