ಪ್ರವಾಹ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವೀಡಿಯೋ ಕಾನ್ಪರೆನ್ಷ್ ಮೂಲಕ ಮಾಹಿತಿ ಸಂಗ್ರಹ

 

ಬೆಂಗಳೂರು, ಆ.20-ಕೊಡಗು, ದಕ್ಷಿಣಕನ್ನಡ, ಶಿವಮೊಗ್ಗ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ವೀಡಿಯೋ ಕಾನ್ಪರೆನ್ಷ್ ಮೂಲಕ ಮಾಹಿತಿ ಪಡೆದರು.
ವಿಧಾನಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಪರೆನ್ಸ್ ನಡೆಸಿದ ಮುಖ್ಯಕಾರ್ಯದರ್ಶಿಗಳು, ಆಯಾ ಜಿಲ್ಲಾಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ, ಅತಿವೃಷ್ಟಿ, ಜನರ ರಕ್ಷಣೆ, ಸಾರಿಗೆ ವ್ಯವಸ್ಥೆ, ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.
ವೀಡಿಯೋ ಕಾನ್ಪರೆನ್ಸ್ ಸಂವಾದದರಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗಂಗರಾಮ್ ಬಡೇರಿಯ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಪ್ರಧಾನಕಾರ್ಯದರ್ಶಿ ಎಂ.ಕೆ.ಅತೀಕ್, ವಸತಿ ಇಲಾಖೆ ಕಾರ್ಯದರ್ಶಿ ಡಾ.ಜೆ.ರವಿಶಂಕರ್, ಕೃಷಿ ಇಲಾಖೆ ಪ್ರಧಾನಕಾರ್ಯದರ್ಶಿ ಮಹೇಶ್ವರರಾವ್ ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ