ಪರಿಹಾರದ ಸಾಮಗ್ರಿಗಳು 16 ಟ್ರಕ್‍ಗಳಲ್ಲಿ ಕೇರಳ ಹಾಗೂ ಕೊಡಗಿಗೆ

ಬೆಂಗಳೂರು, ಆ.21-ಕೇರಳ ಹಾಗೂ ಕೊಡಗು ನೆರೆ ಸಂತ್ರಸ್ಥರ ಪರಿಹಾರಕ್ಕೆ ಬಿಟಿಎಂ ಲೇಔಟ್ ಜಯನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ ಅವರನೇತೃತ್ವದಲ್ಲಿ ಸುಮಾರು ಒಂದುಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪರಿಹಾರದ ಸಾಮಗ್ರಿಗಳನ್ನು 16 ಟ್ರಕ್‍ಗಳಲ್ಲಿ ಕಳುಹಿಸಿಕೊಡಲಾಗಿದೆ.
ದಿನನಿತ್ಯದ ಬಳಕೆ ಪದಾರ್ಥಗಳಾದ ಅಕ್ಕಿ, ಎಣ್ಣೆ, ಬೇಳೆಕಾಳು, ಸೋಪು, ಟೂತ್‍ಪೇಸ್ಟ್, ಔಷಧಿ, ಬಟ್ಟೆ ಮಹಿಳೆಯರ ಒಳ ಉಡುಪುಗಳನ್ನು ವ್ಯವಸ್ಥಿತವಾಗಿ ಪ್ಯಾಕ್ ಮಾಡಿ ಕಳುಹಿಸಿಕೊಡಲಾಗಿದೆ. ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಹಾರ ಕಾರ್ಯಕ್ಕೆ ಇಷ್ಟು ಪ್ರಮಾಣದಲ್ಲಿ ಸಂಗ್ರಹಿಸಿ ಕಳುಹಿಸಿಕೊಟ್ಟಿರುವುದಕ್ಕೆ ಪಕ್ಷದಿಂದ ಪ್ರಶಂಸೆ ವ್ಯಕ್ತವಾಗಿದೆ. ಬೇರೆ ಕ್ಷೇತ್ರದ ಶಾಸಕರೂ ಕೂಡ ಇದೇರೀತಿ ಸಂತ್ರಸ್ಥರ ನೆರವಿಗೆ ಧಾವಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ರಾಮಲಿಂಗಾರೆಡ್ಡಿ ಅವರು ಬೆಂಗಳೂರು ಮಹಾನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಪಾರ ಬೆಂಬಲ ಗಳಿಸಿದ್ದಾರೆ. ಅವರನ್ನು ಸಚಿವರನ್ನಾಗಿ ಮಾಡಬೇಕೆಂಬ ಒತ್ತಾಯ ಕೂಡ ಸಾರ್ವಜನಿಕರಿಂದ ಕೇಳಿ ಬಂದಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಅನುಕೂಲವಾಗಲಿದೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ