ಠಾಣೆಗೆ ಮುತ್ತಿಗೆ ಯತ್ನ

ಹುಬ್ಬಳ್ಳಿ:- ಬಕ್ರೀದ ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ, ಪ್ರವಾದಿ ಮಹಮ್ಮದ್ ಪೈಗಂಬರ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಗುಂಪೊಂದು ಆರೋಪಿ ವಿರುದ್ಧ ಕ್ರಮ ಕೈಕೊಳ್ಳುವಂತೆ ಪೊಲೀಸ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಇಂದು ಮಧ್ಯಾಹ್ನ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಬಳಿ ನಡೆದಿದೆ.
ಹುಬ್ಬಳ್ಳಿಯ ನೆಹರೂ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕ ಮುನಾವರ್ ಜಮಾ ಎನ್ನುವರು, ಹಳೇ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಇಂದು ನಡೆದ ಪ್ರಾರ್ಥನೆ ಸಂದರ್ಭದಲ್ಲಿ ಮಹಮ್ಮದ್ ಪೈಗಂಬರ ಕುರಿತು ಆಕ್ಷೇಪಾರ್ಹ ಮಾತುಗಳನ್ನು ಮಾತನಾಡಿದ್ದಾರೆಂದು ಆರೋಪಿಸಲಾಗಿದೆ. ಈ ಸಂಬಂಧ ಅಂಜುಮಾನ ಎ ಇಸ್ಲಾಮ್ ಪದಾಧಿಕಾರಿಗಳ ಜೊತೆ ಚರ್ಚಿಸಿದ ಕೆಲವರು, ಆತನ ವಿರುದ್ದ ಕ್ರಮ ಕೈಕೊಳ್ಳುವಂತೆ ಪೊಲೀಸ ಠಾಣೆಯಲ್ಲಿ ದೂರ ಸಲ್ಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ