ಕನ್ನಡ ಪರಸಂಘಟನೆ ಮುಖಂಡ ಸಾವನ್ ಆಗ್ರಹ ಕಡ್ಯಾಳಗೆ ನಾಮ ನಿರ್ದೇಶನ ಮಾಡಿ

ಬೀದರ್: ಹಿಂದುಳಿದ ವರ್ಗದ ನಾಯಕ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ರಾಜು ಕಡ್ಯಾಳ ಅವರಿಗೆ ವಿಧಾನ ಪರಿಷತ್ ಸದಸ್ಯ ಅಥವಾ ರಾಜ್ಯಮಟ್ಟದ ನಿಗಮ ಮಂಡಳಿಗಳಿಗೆ ನಾಮ ನಿರ್ದೇಶನ ಮಾಡಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ಸಾವನ್ ವಾಗ್ಲೆ ಆಗ್ರಹಿಸಿದೆ.
ಈ ಕುರಿತು ಸಹಕಾರ, ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪುರ ಅವರಿಗೆ ಮನವಿ ಸಲ್ಲಿಸಿ, ಸಮಾಜ ಸುಧಾರಕರಾದ ರಾಜು ಕಡ್ಯಾಳ ಕಳೆದ ಎರಡ್ಮೂರು ದಶಕಗಳಿಂದ ದಿನ ದಲಿತರ, ಹಿಂದುಳಿದ ವರ್ಗಗಳ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಇಂಥವರನ್ನು ಗುರುತಿಸಿ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಕಡ್ಯಾಳ, ಸಾಹಿತ್ಯ, ಶಿಕ್ಷಣ ಕ್ಷೇತ್ರ ಸೇರಿ ಹಲವು ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಕಡ್ಯಾಳ ಅವರನ್ನು ವಿಧಾನ ಪರಿಷತ್‍ಗೆ ಅಥವಾ ವಿವಿಧ ನಿಗಮ ಮಂಡಳಿಗೆ ನಾಮ ನಿರ್ದೇಶನ ಮಾಡಬೇಕು ಆಗ್ರಹಿಸಿದ್ದಾರೆ.
=========================

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ