ನನ್ನ ಮಗ ಅಮಾಯಕ : ಬಿಡುಗಡೆ ಮಾಡಿ

ಹುಬ್ಬಳ್ಳಿ- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅಮಾಯಕನಾದ ನನ್ನ ಮಗನನ್ನು ಸಿಲುಕಿಸಲಾಗಿದೆ. ಎಸ್ ಐ ಟಿ ಅಧಿಕಾರಿಗಳು ಯಾವುದೇ ತಪ್ಪು ಮಾಡದ ನನ್ನ ಮಗನನ್ನು ಬಂಧಿಸಿದ್ದಾರೆ ಎಂದು ಬಂಧಿತ ಆರೋಪಿ ಅಮಿತ್ ಬದ್ದಿ ತಾಯಿ ಜಯಶ್ರೀ ಬದ್ದಿ ಕಣ್ಣೀರು ಹಾಕಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಅಮಿತ್ ಬದ್ದಿಗೂ ಸಂಬಂಧವಿಲ್ಲ. ಅಮಾಯಕನನ್ನು ವಿನಾಕಾರಣ ಬಂಧಿಸಿ ಕಿರುಕುಳ ನೀಡಲಾಗುತ್ತಿದೆ. ಥರ್ಡ್ ಡಿಗ್ರೀ ಟ್ರೀಟ್ಮೆಂಟ್ ಕೊಡಲಾಗುತ್ತಿದೆ ಎಂದರು. ನಮ್ಮ ಕುಟುಂಬಕ್ಕೆ ಮಾನಸಿಕ ಆಘಾತವಾಗಿದೆ.
ಸಮಾಜದಲ್ಲಿ ತಲೆ ಎತ್ತಿ ಬದುಕಲು ಆಗದ ಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬದ ಆಧಾರವಾ ಸ್ತಂಭವಾಗಿದ್ದ ಅಮಿತ್ ಬದ್ದಿ ಬಿಡುಗಡೆಗೆ ಸಹಕರಿಸುವಂತೆ ಕವಿತಾ ಲಂಕೇಶ್‌, ಅವರ ಸಹೋದರ ಇಂದ್ರಜಿತ್ ಲಂಕೇಶ್, ಗೃಹಸಚಿವರು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ
ಬರೆದು ಮನವಿ ಮಾಡಿದ್ದೇವೆ ಎಂದರು.

ಅಷ್ಟೇ ಅಲ್ಲದೇ, ಅಮಿತ್ ಬದ್ದಿ ಬಂಧನದಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಪತ್ನಿ ಅಂಜಲಿ ಬದ್ದಿ ಕೂಡ ಮಾಧ್ಯಮದವರ ಎದುರು ಕಣ್ಣೀರು ಹಾಕಿದರು. ಅವರೆ ನಮ್ಮ ಮನೆಗೆ ಆಧಾರವಾಗಿದ್ದರು. ಅವರು ಯಾವ ತಪ್ಪನು ಮಾಡಿಲ್ಲ. ಇದರಿಂದ ನಿತ್ಯ ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ. ನಮ್ಮ ಮೇಲೆ ದಯೆ ತೋರಿ ನನ್ನ ಪತಿಯನ್ನು ಬಿಡುಗಡೆ ಮಾಡಬೇಕು ಎಂದು
ಸುದ್ಧಿಗೋಷ್ಠಿಯಲ್ಲಿ ಕಣ್ಣೀರಿಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ