ಯುವಕನಿಗೆ ಚಾಕು ಇರಿತ

ಹುಬ್ಬಳ್ಳಿ-: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಸ್ನೇಹಿತನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ, ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಬಳಿ ಇಂದು ಸಂಜೆ ನಡೆದಿದೆ. ವಾಶೀಮ್ ಎಂಬಾತನೇ ಚಾಕು ಇರಿತಕ್ಕೊಳಗಾದ ಯುವಕನಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕಾಗಿ ಪ್ರಾರಂಭವಾದ ಸ್ನೇಹಿತರ ನಡುವಿನ ಜಗಳ, ವಿಕೋಪಕ್ಕೆ ತಿರುಗಿದೆ. ಈ ವೇಳೆ ದಾವುದ್ ಹಾಗೂ ಆತನೊಂದಿಗೆ ನಾಲ್ಕುಜನ ಸೇರಿಕೊಂಡು ವಾಸಿಮ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವಾಶೀಮ್ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಾಲಗಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆದ ಉಪನಗರ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ