ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ದಿಗ್ಬಂಧನ

ಹುಬ್ಬಳ್ಳಿ-: ಧಾರವಾಡ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಗೆ ಕಾರ್ಯಕ್ರಮಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೊಠಡಿಯಲ್ಲಿ ಕೂಡಿ ಹಾಕಿದ ಘಟನೆ ನಡೆದಿದೆ. ಹುಬ್ಬಳ್ಳಿಯ ‌ಮಹಿಳಾ ವಿದ್ಯಾಪೀಠದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿದ್ದ ರಾಜ್ಯ ಸಭೆ ಸದಸ್ಯ ಬಿ‌ ಕೆ ಹರಿಪ್ರಸಾದ ಹಾಗೂ ಶಾಸಕರು ಒಂದು ಗಂಟೆ ತಡವಾಗಿ ಆಗಮಿಸಿದರು. ಆದ್ರೆ ಕಾರ್ಯಕ್ರಮ ವಿಳಂಭವಾಗುತ್ತಿದ್ದರಿಂದ ವಿದ್ಯಾರ್ಥಿಗಳು ಕಾರ್ಯಕ್ರಮದಿಂದ ಎದ್ದು ಹೋಗಲು ಆರಂಭಿಸಿದರು. ಇದರಿಂದ ಮುಜುಗರಕ್ಕೆ ಒಳಗಾದ ಕಾಂಗ್ರೆಸ್ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ತಡೆದು, ಒತ್ತಾಯ ಪೂರ್ವಕವಾಗಿ ಕಾರ್ಯಕ್ರಮ ಮುಗಿಸಿಕೊಂಡು ಹೋಗುವವರೆಗೂ ಬಾಗಿಲು ತಗೆಯುವದಿಲ್ಲ ಎಂದು ದರ್ಪ ಮೆರೆದರು. ಅಗ ಕಾರ್ಯಕ್ರಮದಲ್ಲಿದ್ದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಬೇಕೋ ಬೇಡವೋ ಎಂಬಂತೆ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಸಂಗ ನಡೆಯಿತು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ