ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಜತೆ ರಕ್ಷಣಾ ಸಚಿವೆ ನಡೆದುಕೊಂಡ ರೀತಿಗೆ ಉಪ ಮುಖ್ಯಮಂತ್ರಿ ಅಸಮಾಧಾನ

 

ಬೆಂಗಳೂರು, ಆ.25- ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಡೆದುಕೊಂಡ ರೀತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾದ ಅವರಿಗೆ ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ನಾವು ಹೇಳಿಕೊಡಬೇಕಾ ? ಎಂದು ಪ್ರಶ್ನಿಸಿದ್ದಾರೆ.

ಸಿದ್ದಾರ್ಥ ಶಿಕ್ಷಣ ಸಂಸ್ಥೆ ವತಿಯಿಂದ ಪ್ರವಾಹ ಪೀಡಿತ ಕೇರಳಕ್ಕೆ 9 ಟ್ರಕ್‍ಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ಕಳುಹಿಸುವ ಸಂಬಂಧ ತಮ್ಮ ನಿವಾಸದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ಈ ಮೊದಲೇ ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿತ್ತು. ಅವರ 17 ಸಂಸದರೊಂದಿಗೆ ಬಂದು ಕೆಲಸ ಮಾಡಬೇಕಿತ್ತು. ಅದನ್ನು ಬಿಟ್ಟು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಹರಿಹಾಯ್ದಿರುವುದು ಎಷ್ಟು ಸರಿ ? ಎಂದು ಪರಮೇಶ್ವರ್ ಕಿಡಿಕಾರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ