ಅಸ್ಸಾಂ ಮೂಲದ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ

 

ಬೆಂಗಳೂರು, ಆ.27- ಅಸ್ಸಾಂ ಮೂಲದ ನವ ವಿವಾಹಿತೆಯೊಬ್ಬರು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬನ್ನೇರುಘಟ್ಟದ ಸಿ.ಕೆ. ಪಾಳ್ಯದಲ್ಲಿ ಅಸ್ಸಾಂ ಮೂಲದ ಸೋನಾಥೋನ್ (18) ಆತ್ಮಹತ್ಯೆ ಮಾಡಿಕೊಂಡವರು. ಸೋನಾಥೋನ್ ಅವರಿಗೆ ಕಳೆದ ತಿಂಗಳು ಮದುವೆಯಾಗಿತ್ತು. ನಿನ್ನೆ ಆಕೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಮನೆಯ ಮುಂಭಾಗ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೆಟ್ಟಿಲುಗಳ ಕಬ್ಬಿಣಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೀತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ರಾತ್ರಿ ಮನೆಯಿಂದ ಹೊರಬಂದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅಸ್ಸಾಂನಲ್ಲಿರುವ ಅವರ ಪೆÇೀಷಕರಿಗೆ ಮಾಹಿತಿ ನೀಡಿದ್ದು, ಅವರು ಬಂದ ನಂತರ ಹೇಳಿಕೆ ಪಡೆದು ತನಿಖೆ ನಡೆಸುವುದಾಗಿ ಬನ್ನೇರುಘಟ್ಟ ಪೆÇಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ