ರೈಲಿಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

 

ಬೆಂಗಳೂರು, ಆ.27- ರೈಲಿಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ವಾರಸುದಾರರ ಪತ್ತೆಗಾಗಿ ಯಶವಂತಪುರ ರೈಲ್ವೆ ಪೆÇಲೀಸರು ಮನವಿ ಮಾಡಿದ್ದಾರೆ.
ಸುಮಾರು 60 ವರ್ಷದ ವ್ಯಕ್ತಿ ಆ.19ರಂದು ಯಶವಂತಪುರ- ಚಿಕ್ಕಬಾಣವಾರ ಬಳಿ ರೈಲಿಗೆ ಸಿಕ್ಕಿ ಗಂಭೀರ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಿಸದೆ ಆ.24ರಂದು ಈ ವ್ಯಕ್ತಿ ಸಾವನ್ನಪ್ಪಿದ್ದು, ವಾರಸುದಾರರು ಪತ್ತೆಯಾಗಿಲ್ಲ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿಡಲಾಗಿದೆ.
ಈ ವ್ಯಕ್ತಿಯ ವಾರಸುದಾರರು ಕೂಡಲೇ ಯಶವಂತಪುರ ರೈಲ್ವೆ ಪೆÇಲೀಸರನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ