ಸಂಭ್ರಮದ ಸಿದ್ಧಾರೂಢರ 89 ನೇ ತೆಪ್ಪೋತ್ಸವ

ಹುಬ್ಬಳ್ಳಿ- ಸಿದ್ದಾರೂಢ ಸ್ವಾಮೀಜಿಯ 89 ನೇ  ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಜರುಗಿತು. ಸಾವಿರಾರು ಭಕ್ತರು ತೆಪ್ಪೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದರೂಢ ಶ್ರೀಗಳ ಕೃಪೆಗೆ ಪಾತ್ರರಾದರು.
ನಗರದ ಸಿದ್ದರೂಢ ಮಠದಲ್ಲಿ ಪ್ರತಿ ವ

ರ್ಷದಂತೆ ಈ ವರ್ಷವೂ ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ನಡೆದ ತಪ್ಪೋತ್ಸವಕ್ಕೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಸಾಕ್ಷಿಯಾದರು. ಕಣ್ಣು ಹಾಯಿಸಿದಲೆಲ್ಲ ಜನ ಸಾಗರವೇ ನೆರೆದಿತ್ತು. ಓಂ ನಮ: ಶಿವಾಯ ಓಂ ನಾಮಸ್ಮರಣೆಗಳು ಅನುರಣಿಸಿದವು. ಕಲ್ಯಾಣಿಯಲ್ಲಿ ತೇರು ಐದು ಸುತ್ತ ಪ್ರದಶಕ್ಷಿಣೆ ಹಾಕಿತು. ಕಲ್ಯಾಣಿಯ ಸುತ್ತ ಕಿಕ್ಕಿರಿದು ಸೇರಿದ ಭಕ್ತರು ಉತ್ತತ್ತಿ, ಬಾಳೆಹಣ್ಣು, ಲಿಂಬೆಹಣ್ಣು ಎಸೆದು ಸ್ವಾಮಿ ಆಶ್ರೀರ್ವಾದ ಪಡೆದು ಕೃತಾರ್ಥರಾದರು. ರಾಜ್ಯ ಅಲ್ಲದೇ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶದಿಂದ ಆಗಮಿಸಿದ ಭಕ್ತರು ಜಲರಥೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದಾರೂಢರ ಆಶ್ರೀರ್ವಾದ ಪಡೆದುಕೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ