ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕಿ ಅಧಿತಿ ಸಾಗರ್‌ಗೆ ‘ಧಮ್’ ಸಂಕಷ್ಟ!

ಬೆಂಗಳೂರು: ಕನ್ನಡದ ರ್ಯಾಪರ್ ಚಂದನ್ ಶೆಟ್ಟಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು ಇದರ ಬೆನ್ನಲ್ಲೇ ಇದೀಗ ಸ್ಯಾಂಡಲ್ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ಗಾಯಕಿ ಅಧಿತಿ ಸಾಗರ್ ಗೆ ಸಂಕಷ್ಟ ಎದುರಾಗಿದೆ.
ರ್ಯಾಂಬೋ 2 ಚಿತ್ರದಲ್ಲಿನ ಧಮ್ ಮಾರೋ ಧಮ್ ಹಾಡಿನ ಸೃಷ್ಟಿಕರ್ತ ಅರ್ಜುನ್ ಜನ್ಯ ಮತ್ತು ಈ ಹಾಡು ಹಾಡಿದ್ದ ಗಾಯಕಿ ಅಧಿತಿ ಸಾಗರ್ ಗೆ ಸಿಸಿಬಿ ಪೊಲೀಸರು ಸಮನ್ಸ್ ನೀಡಲು ಸಿದ್ಧತೆ ನಡೆಸಿದೆ.
ಈ ಹಾಡಿನ ಮೂಲಕ ಗಾಂಜಾ ಹೊಡೆಯಲು  ಪ್ರಚೋದನೆ ನೀಡಲಾಗುತ್ತದೆ. ಈ ಹಾಡು ಯುವಜನತೆಗೆ ಗಾಂಜಾ ಸೇವನೆ ಮಾಡಲು ಪ್ರಚೋದನೆ ನೀಡುವ ರೀತಿಯಲ್ಲಿದೆ. ಯುವ ಜನತೆ ಪಾರ್ಟಿ ಹಾಗೂ ಪಬ್ ಗೆ ಹೋದಾಗ ಈ ಹಾಡು ಕೇಳಿ ಗಾಂಜಾಗೆ ಆಕರ್ಷಿತರಾಗಿ ಅದನ್ನು ಸೇವಿಸಲು ಮುಂದಾಗುತ್ತಾರೆ ಎಂಬ ಹಿನ್ನೆಲೆಯಲ್ಲಿ ಸಿಸಿಬಿ ತಂಡ ಇಬ್ಬರಿಗೂ ಸಮನ್ಸ್ ನೀಡಲು ಚಿಂತನೆ ನಡೆಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ರ್ಯಾಪರ್ ಚಂದನ್ ಶೆಟ್ಟಿ ಅವರು ಹೊಸದಾಗಿ ರ್ಯಾಪ್ ಸಾಂಗ್ ವೊಂದನ್ನು ಬಿಡುಗಡೆ ಮಾಡಿದ್ದರು. ಈ ಹಾಡಿನಲ್ಲಿ ಭಂಗಿ ಹೊಡೆದು ನಗುತಾ ಇರು ಬಳಸಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ಚಂದನ್ ಶೆಟ್ಟಿಗೆ ನೋಟೀಸ್ ನೀಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ