ಹಾಲು ತೆಗೆದುಕೊಂಡು ಬರುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಸರಗಳ್ಳತನ

ಬೆಂಗಳೂರು, ಆ.28- ಮನೆ ಸಮೀಪದಲ್ಲಿನ ಬೂತ್‍ಗೆ ಹೋಗಿ ಹಾಲು ತೆಗೆದುಕೊಂಡು ಬರುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಸರಗಳ್ಳರು 60 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಾಲಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸುಂದರನಗರದ ನಿವಾಸಿ ಗಿರಿಜಾ ಸರ ಕಳೆದುಕೊಂಡ ಮಹಿಳೆ.
ಇಂದು ಬೆಳಗ್ಗೆ ಎಂದಿನಂತೆ ಗಿರಿಜಾ ಎಂಬುವವರು ಮನೆ ಸಮೀಪದ ಹಾಲಿನ ಬೂತ್‍ಗೆ ಹೋಗಿ ಹಾಲು ತೆಗೆದುಕೊಂಡು 7.30ರಲ್ಲಿ ಮನೆಗೆ ಹಿಂದಿರುಗಿದ್ದರು.
ಈ ಬಗ್ಗೆ ಬೈಕ್‍ನಲ್ಲಿ ಇವರನ್ನು ಹಿಂಬಾಲಿಸಿ ಬಂದ ಇಬ್ಬರು ಸರಗಳ್ಳರು ಸಮಯ ಸಾಧಿಸಿ ಗಿರಿಜಾ ಅವರ ಕೊರಳಲ್ಲಿದ್ದ 60 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಸಹಾಯಕ್ಕಾಗಿ ಕೂಗಿಕೊಂಡರೂ ಪ್ರಯೋಜನವಾಗಿಲ್ಲ. ಈ ಸಂಬಂಧ ಗಿರಿಜಾ ಜಾಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ