ನಿಂತಿದ್ದ ಕ್ಯಾಂಟರ್‍ಗೆ ಡಿಕ್ಕಿ ಹೊಡೆದ ಸವಾರರಿಬ್ಬರೂ ಸ್ಥಳದಲ್ಲೇ ಸಾವು

 

ನೆಲಮಂಗಲ, ಆ. 28- ಬೈಕೊಂದು ನಿಂತಿದ್ದ ಕ್ಯಾಂಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಟಿ.ಬೇಗೂರು ಸಮೀಪದ ತಾಳೆಕೆರೆ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.
ತುಮಕೂರಿನ ಕೊರಟಗೆರೆಯ ಎತ್ತಗಾನಹಳ್ಳಿ ನಿವಾಸಿ ಅರುಣ್ ಕುಮಾರ್ (32) ಮತ್ತು ಮಧುಗಿರಿಯ ಹರೀಶ್ ಬಾಬು(31) ಮೃತಪಟ್ಟ ಸವಾರರು. ಮೃತರು ಬೈಕ್‍ನಲ್ಲಿ ಕೊರಟಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ತಾಳೆಕರೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ.
ಅರುಣ್‍ಕುಮಾರ್ ಮತ್ತು ಹರೀಶ್ ಬೆಂಗಳೂರಿನ ಅತ್ತಿಬೆಲೆಯ ಸಾಫ್ಟ್‍ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಬೆಳಗ್ಗೆ 10ಗಂಟೆಗೆ ಕೊರಟಗೆರೆಗೆ ಹೋಗಿದ್ದರು. ಕೆಲಸ ಮುಗಿಸಿ ನಿನ್ನೆ ಸಂಜೆ 7ಗಂಟೆಗೆ ಅಲ್ಲಿಂದ ಹೊರಟು ಬೈಕ್‍ನಲ್ಲಿ ಬರುತ್ತಿದ್ದಾಗ ನೆಲಮಂಗಲದ ದೊಡ್ಡೇರಿ ಗೇಟ್ ಬಳಿ ನಿಂತಿದ್ದ ಕ್ಯಾಂಟರ್‍ಗೆ ಡಿಕ್ಕಿ ಹೊಡೆದಿದೆ.

ಕ್ಯಾಂಟರ್ ನಿಲ್ಲಿಸಿದ ಬಗ್ಗೆ ಯಾವುದೇ ಇಂಡಿಕೇಟರ್ ಹಾಕದ ಕಾರಣ ಈ ಅವಘಡ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ. ನೆಲಮಂಗಲ ಸಂಚಾರಿ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು, ಆ.28- ಮಗನಿಗೆ ಹೆಣ್ಣು ನೋಡುವ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದು ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸುದ್ದಗುಂಟೆಪಾಳ್ಯ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗುರಪ್ಪನಪಾಳ್ಯದ ಬಿರಿಯಾನಿಗಲ್ಲಿ ನಿವಾಸಿ ಪಮಿದಬೇಗಂ (45) ಕೊಲೆಯಾದ ನತದೃಷ್ಟೆ.
ಮಗನಿಗೆ ಹೆಣ್ಣು ನೋಡುವ ವಿಚಾರವಾಗಿ ಸಂಜೆ ಪಮಿದಬೇಗಂ ದಂಪತಿ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ತಾಳ್ಮೆ ಕಳೆದುಕೊಂಡ ಈಕೆಯ ಪತಿ ಚಾಕುವಿನಿಂದ ಚುಚ್ಚಿದ್ದಾನೆ.
ಗಂಭೀರ ಗಾಯಗೊಂಡ ಪಮಿದಬೇಗಂ ಅವರನ್ನು ಸಾಗರ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರಾದರೂ ಪ್ರಯೋಜನವಾಗದೆ ರಾತ್ರಿ ಮೃತಪಟ್ಟಿದ್ದಾರೆ.
ಘಟನೆ ಬಳಿಕ ಈಕೆಯ ಪತಿ ಪರಾರಿಯಾಗಿದ್ದಾನೆ. ವೃತ್ತಿಯಲ್ಲಿ ಲಾರಿಚಾಲಕನಾಗಿರುವ ಈತನ ಪತ್ತೆಗೆ ಸುದ್ದಗುಂಟೆಪಾಳ್ಯ ಠಾಣೆ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ