ಸಿಎಂ ರಾಮನಗರ ಜಿಲ್ಲಾ ಪ್ರವಾಸ

 

ಬೆಂಗಳೂರು, ಆ.28-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ರಾಮನಗರ ಜಿಲ್ಲಾ ಪ್ರವಾಸ ಕೈಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಇಂದು ಮೈಸೂರು ಪ್ರವಾಸದಲ್ಲಿರುವ ಕುಮಾರಸ್ವಾಮಿ ನಾಳೆ ಅಲ್ಲಿಂದ ರಾಮನಗರ ಜಿಲ್ಲೆಗೆ ಆಗಮಿಸಲಿದ್ದಾರೆ.
ನಾಳೆ ಬೆಳಗ್ಗೆ ರಾಮನಗರ ತಾಲ್ಲೂಕಿನ ಕೈಲಂಚ ಗ್ರಾಮದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದುಕೊರತೆಗಳನ್ನು ಆಲಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕಾರ ಮಾಡಲಿದ್ದಾರೆ.
ನಂತರ ಸುಗ್ಗನಹಳ್ಳಿ, ಕನಕಪುರ ತಾಲ್ಲೂಕಿನ ಹಾರೋಹಳ್ಳಿ, ದೊಡ್ಡಮರಳವಾಡಿ ಗ್ರಾಮದಲ್ಲೂ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಲಿದ್ದಾರೆ.
ನಾಳೆ ರಾತ್ರಿ ರಾಮನಗರ ಜಿಲ್ಲೆ ಪ್ರವಾಸ ಮುಗಿಸಿ ಬೆಂಗಳೂರಿಗೆ ಆಗಮಿಸುವ ಕಾರ್ಯಕ್ರಮವಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ