ನಟ ನಂದಮೂರಿ ಹರಿಕೃಷ್ಣ ಅಪಘಾತದಲ್ಲಿ ಸಾವು

ಹೈದರಾಬಾದ್:ಆ-೨೯: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ಎನ್ ಟಿಆರ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಇಂದು ಭೀಕರ ಕಾರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ನಂದಮೂರಿ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರು ಭೀಕರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಮಿನೇನಿ ಆಸ್ಪತ್ರೆಯಲ್ಲಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದ ಹರಿಕೃಷ್ಣ, ನಾರ್ಕೆಟ್​ಪಲ್ಲಿ-ಆದಂಕಿ ಹೆದ್ದಾರಿಯಲ್ಲಿ ಎದುರು ಇದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿದಾಗ ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಹರಿಕೃಷ್ಣ ತಲೆಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಹರಿಕೃಷ್ಣ ಅವರು ಬಾಲನಟನಾಗಿ ಹಾಗೂ ನಟನಾಗಿ 13 ಚಿತ್ರಗಳಲ್ಲಿ ನಟಿಸಿದ್ದಾರೆ. ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿತ್ತು.

NTR’s son Nandamuri Harikrishna,died,road accident

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ