ಸಮ್ಮಿಶ್ರ ಸರ್ಕಾರಕ್ಕೆ ಏನು ಆಗಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ- ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬಹಳ ಭದ್ರವಾಗಿದೆ. ಏನು ಆಗೋದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ಆದಮೇಲೆ ಸಿಎಮ್ ಆಗುತ್ತೇನೆ ಎಂದಿದ್ದೇನೆ. ಸಮ್ಮಿಶ್ರ ಸರ್ಕಾರ ಏನೇ ಮಾಡಿದ್ರೂ, ಎರಡೂ ಪಕ್ಷಕ್ಕೆ ಗೌರವ ಸಲ್ಲುತ್ತೆ. ನಮ್ಮವರೇ ಮಂತ್ರಿಯಾಗಿದ್ದಾರೆ, ಹೀಗಾಗಿ ನಮ್ಮನ್ನು ಕಡೆಗಣಿಸುತ್ತಾರೆ ಎನ್ನುವುದು ಸರಿಯಲ್ಲ ಎಂದರು. ಜೆಡಿಎಸ್‌ನವರು ಕೆ‌.ಸಿ. ವೇಣುಗೊಪಾಲ್‌ಗೆ ಪತ್ರ ಬರೆದಿಲ್ಲ, ದೂರು ನೀಡಿಲ್ಲ. ಮುಂದಿನ ಚುನಾವಣೆಗೆ ನಿಲ್ಲುತ್ತೇನೆ ಎಂದು ನಾನು ಹೇಳಿಲ್ಲ. ಜನರು ಆಶೀರ್ವಾದ ಮಾಡಿದ್ರೆ ಮುಂದೆ ಸಿಎಮ್ ಆಗುತ್ತೇನೆ ಎಂದಷ್ಟೇ ಹೇಳಿದ್ದೇನೆ. ನಾವು ಜಾರಿಗೆ ತಂದಿರುವ ಎಲ್ಲ ಸ್ಕೀಮ್‌ಗಳಿಗೂ ಹಣ ಬಿಡುಗಡೆ ಮಾಡುವ ಸಂಬಂಧ ಸಮನ್ವಯ ಸಮಿತಿಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. ಇನ್ನು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ ಎನ್ನುವುದು ಶುದ್ಧ ಸುಳ್ಳು ಎಂದು ಸ್ಪಷ್ಟ ಪಡೆದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ