ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿ

ಬೆಂಗಳೂರು, ಸೆ.1- ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವಿ ಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಎಂಬುವವರು ಹೊಟೇಲ್ ಕಾರ್ಮಿಕರಾಗಿದ್ದು, ರಾತ್ರಿ 10 ಗಂಟೆ ಸಮಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದರು. ಮಿನರ್ವ ಸರ್ಕಲ್ ಬಳಿ ಬರುತ್ತಿದ್ದಂತೆ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಬೆದರಿಸಿ ಅವರ ಕೈಲಿದ್ದ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.
ಈ ಬಗ್ಗೆ ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ