ಐದು ವರ್ಷದವರೆಗೂ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ: ಡಾ.ಎಂ.ವೀರಪ್ಪಮೊಯ್ಲಿ

ಬೆಂಗಳೂರು, ಸೆ.1- ಸಮ್ಮಿಶ್ರ ಸರ್ಕಾರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಐದು ವರ್ಷದವರೆಗೂ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಂಸದ ಡಾ.ಎಂ.ವೀರಪ್ಪಮೊಯ್ಲಿ ಹೇಳಿದ್ದಾರೆ.
ನಂದಿಬೆಟ್ಟದಲ್ಲಿ ನಂದಿ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಕುರಿತು ಚರ್ಚೆಗಳೆ ಆಗುತ್ತಲೇ ಇವೆ. ಪ್ರಸ್ತುತ ಈ ಸ್ಥಾನ ಖಾಲಿ ಇಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.
ಸಮ್ಮಿಶ್ರ ಸರ್ಕಾರ ನೂರು ದಿನಗಳನ್ನು ಪೂರೈಸಿದ್ದು, ಒಳ್ಳೆ ಕೆಲಸವನ್ನು ಮಾಡುತ್ತಿದೆ. ಇದೊಂದು ಮಾದರಿ ಸರ್ಕಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಸಬ್ಸಿಡಿ ನೀಡಬೇಕಿತ್ತು. ಅದು ಬಿಟ್ಟು ಗ್ರಾಹಕರ ಮೇಲೆ ಹೊರೆ ಹೊರಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಸಬ್ಸಿಡಿ ನೀಡಲಾಗಿತ್ತು. ನರೇಂದ್ರ ಮೋದಿ ಸರ್ಕಾರ ಕಡಿಮೆ ಬೆಲೆ ಇದ್ದಾಗ ಹಣ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ