ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿ

ಬೆಂಗಳೂರು, ಸೆ.1- ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಟ್ಟಿಗೆಪಾಳ್ಯದ ಬಿ ಕ್ರಾಸ್ ನಿವಾಸಿ ಮಂಜುನಾಥ್ ಎಂಬುವವರು ನಿನ್ನೆ ಬೆಳಗ್ಗೆ 8 ಗಂಟೆ ಸಮಯದಲ್ಲಿ ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದರು. ಈ ವೇಳೆ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿದ್ದಾರೆ.
ಬೀರುವನ್ನು ಮೀಟಿದ ಚೋರರು ಅದರಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಕೈಗೆ ಸಿಕ್ಕಿದ 92 ಗ್ರಾಂ ತೂಕದ ಚಿನ್ನಾಭರಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ರಾತ್ರಿ 9 ಗಂಟೆ ಸಮಯದಲ್ಲಿ ಮಂಜುನಾಥ್ ಅವರು ಮನೆಗೆ ವಾಪಸಾದಾಗಲೇ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೆÇಲೀಸರಿಗೆ ವಿಷಯ ತಿಳಿಸಿದ್ದು, ಶ್ವಾನದಳ ಹಗೂ ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ