ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರಗೆ ರಾಜ್ಯ ಪ್ರಶಸ್ತಿ

ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರಗೆ ರಾಜ್ಯ ಪ್ರಶಸ್ತಿ

ಬೀದರ, ಸೆ. 04:- ಇಲ್ಲಿಯ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಎಸ್‍ಸಿ, ಎಸ್‍ಟಿ ಪತ್ರಿಕಾ ಸಂಪಾದಕರ ಸಂಘದ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಬಿ. ನಾರಾಯಣರಾವ್, ಕರ್ನಾಟಕ ರಾಜ್ಯ ಎಸ್‍ಸಿ, ಎಸ್‍ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚಲುವರಾಜು, ಪ್ರಧಾನ ಕಾರ್ಯದರ್ಶಿ ನಾಗತಿಹಳ್ಳಿ ನಾಗರಾಜ, ಪತ್ರಕರ್ತ ಮಾಳಪ್ಪ ಅಡಸಾರೆ ಮತ್ತಿತರರು ಇದ್ದರು.

ಮೂರೂವರೆ ದಶಕಗಳಿಂದ ಪತ್ರಿಕಾ ರಂಗದಲ್ಲಿ ಇರುವ ಮಲ್ಲಿಕಾರ್ಜುನ ಬಿರಾದಾರ ಜಿಲ್ಲೆಯ ಹಿರಿಯ ಪತ್ರಕರ್ತರಲ್ಲಿ ಒಬ್ಬರಾಗಿದ್ದಾರೆ. ಮೂರು ಅವಧಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸ್ಥಳೀಯ ಪರಿಹಾರ ಕನ್ನಡ ದಿನಪತ್ರಿಕೆಯ ಸಂಪಾದಕರಾಗಿರುವ ಅವರು ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿ, ಸನ್ಮಾನಗಳಿಗೆ ಭಾನರಾಗಿದ್ದಾರೆ.

ಪತ್ರಿಕಾ ರಂಗದ ಜತೆಗೆ ಅವರು ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯ ಹಾಗೂ ಕಲಬುರ್ಗಿ-ಬೀದರ-ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕರೂ ಆಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ