ಅತಿವೃಷ್ಟಿಯಿಂದ ಸಂಕಷ್ಟಕ್ಕೀಡಾಗಿರುವವರಿಗೆ ಜೆಡಿಎಸ್ 15.62ಲಕ್ಷ ರೂ. ದೇಣಿಗೆ

ಬೆಂಗಳೂರು, ಸೆ.6-ಅತಿವೃಷ್ಟಿಯಿಂದ ಸಂಕಷ್ಟಕ್ಕೀಡಾಗಿರುವ ಜನರಿಗಾಗಿ ಬೆಂಗಳೂರು ಮಹಾನಗರ ಜೆಡಿಎಸ್ 15.62ಲಕ್ಷ ರೂ. ದೇಣಿಗೆ ನೀಡಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ಅವರು ಡಿಡಿ ಸಲ್ಲಿಸಿದ್ದಾರೆ.
ಕೊಡಗಿನಲ್ಲಿ ಭಾರೀ ಮಳೆ ಉಂಟಾಗಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ನೆರವು ನೀಡುವ ಉದ್ದೇಶದಿಂದ ಪ್ರಕಾಶ್ ಅವರು ಸಭೆ ನಡೆಸಿ ಸಹಾಯ ಮಾಡುವಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ ಬಿಬಿಎಂಪಿ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದರು.
ಮನವಿಗೆ ಸ್ಪಂದಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು ಕೊಡಗಿನ ನೆರವಿಗಾಗಿ ದೇಣಿಗೆ ನೀಡಿದ್ದರು. ಸಂಗ್ರಹವಾದ ದೇಣಿಗೆ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ