ಮಹಿಳಾ ಕೈದಿಗಳಿಂದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೆ ಘೇರಾವ್

ಬೆಂಗಳೂರು, ಸೆ.9-ಸನ್ನಡತೆ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಸಮಾರಂಭಕ್ಕೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಹಿಳಾ ಕೈದಿಗಳಿಂದ ಘೇರಾವ್ ಎದುರಿಸಬೇಕಾಯಿತು.
ಸನ್ನಡೆಯ ಆಧಾರದಲ್ಲಿ ಬಿಡುಗಡೆಯಾಗುವ ಕೈದಿಗಳ ಪಟ್ಟಿಯಲ್ಲಿ ಮಹಿಳೆಯರ ಹೆಸರು ಇಲ್ಲ , ನಮ್ಮನ್ನೂ ಬಿಡುಗಡೆ ಮಾಡಬೇಕು ಎಂದು ಮಹಿಳಾ ಕೈದಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಮಾಧ್ಯಮದವರನ್ನು ಹೊರಗೆ ಕಳುಹಿಸಿ ಪರಮೇಶ್ವರ್ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಕೈದಿಗಳನ್ನು ಸಮಾಧಾನಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ