ಬೆಂಗಳೂರು , ಸೆ.9-ಸನ್ನಡತೆಯ ಆಧಾರದ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಿಂದ ಇಂದು 79 ಕೈದಿಗಳನ್ನು ಬಿಡುಗಡೆ ಮಾಡಲಾಯಿತು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇಂದು ಏರ್ಪಡಿಸಿದ್ದ ಕೈದಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭಾಗವಹಿಸಿದರು.
ಬಳ್ಳಾರಿ, ಮೈಸೂರು, ಬೆಂಗಳೂರು, ವಿಜಯಪುರ, ಬೆಳಗಾವಿ, ಧಾರವಾಡ, ಕಲಬುರಗಿ ಸೇರಿ ಒಟ್ಟು 8 ಕಾರಾಗೃಹಗಳಿಂದ 79 ಮಂದಿ ಕೈದಿಗಳನ್ನು ಬಿಡುಗಡೆ ಮಾಡಲಾಯಿತು.