ರಾಜ್ಯದಲ್ಲಿ ಭಾರತ್ ಬಂದ್ ಶಾಂತಿಯುತವಾಗಿ ನಡೆದಿದೆ

ಬೆಂಗಳೂರು, ಸೆ.10-ರಾಜ್ಯದಲ್ಲಿ ಭಾರತ್ ಬಂದ್ ಶಾಂತಿಯುತವಾಗಿ ನಡೆದಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಕಮಲ್‍ಪಂತ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ಸಮೀಪ ಇಂದು ಮುಂಜಾನೆ ಕೆಎಸ್‍ಆರ್‍ಟಿಸಿ ಬಸ್‍ವೊಂದಕ್ಕೆ ಕಲ್ಲು ತೂರಿರುವ ಘಟನೆ ಹೊರತುಪಡಿಸಿದರೆ ಉಳಿದಂತೆ ಯಾವುದೇ ರೀತಿಯ ಘಟನೆಗಳು ನಡೆದಿಲ್ಲ ಎಂದು ಹೇಳಿದರು.
ಉಡುಪಿ, ಮಂಗಳೂರು ಭಾಗದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿತ್ತು. ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಒಟ್ಟಾರೆ ರಾಜ್ಯಾದ್ಯಂತ ಭಾರತ್ ಬಂದ್ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ