ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕಕ್ಕೆ ಪರಿಶೀಲನೆ ಹೈಕೋರ್ಟ್ ಸೂಚನೆ

ಚಿಕ್ಕಮಗಳೂರು,ಸೆ.12- ಗುರು ದತ್ತಾತ್ರೇಯ ಬಾಬಬುಡನಗಿರಿ ದರ್ಗಾಕ್ಕೆ ಹಿಂದೂ ಅರ್ಚಕರನ್ನು ನೇಮಿಸುವ ಕುರಿತು ರಾಜ್ಯ ಸರ್ಕಾರ ಪರಿಶೀಲಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ. ಇದು ನಮ್ಮ ಹೋರಾಟಕ್ಕೆ ತಂದ ಜಯ ಎಂದು ಭಜರಂಗ ದಳದ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ರಘು ಸಕಲೇಶಪುರ ತಿಳಿಸಿದ್ದಾರೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಕರ್ನಾಟಕ ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಅರ್ಚಕರ ನೇಮಕ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಹೈ ಕೋರ್ಟ್ ಸೂಚನೆ ಮೇರೆಗೆ ಸರ್ಕಾರ ಪರಿಶೀಲನೆ ನಡೆಸಿ ಅರ್ಚಕರನ್ನು ನೇಮಕ ಮಾಡುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಸರ್ಕಾರವು ಕೋಮು ಸೌಹಾರ್ದತೆ ಧಕ್ಕಯಾಗದಂತೆ ನಿಗಾವಹಿಸಿ ಅರ್ಚಕ ನೇಮ ಮಾಡಲು ಒತ್ತಾಯಿಸಿದರು.
ಜಿಲ್ಲಾ ಕಾರ್ಯದರ್ಶಿ ಯೋಗೀಶ್ ರಾಜ್ ಅರಸ್, ಭಜರಂಗದಳದ ಜಿಲ್ಲಾ ಸಂಯೋಜಕ ಮಂಜು, ಅಮಿತ್ ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ