ರಾಜ್ಯ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

Varta Mitra News

ಹಾಸನ: ಸದಾ ಒಂದಿಲ್ಲೊಂದು ವಿಶೇಷ. ಅಚ್ಚರಿ ಭವಿಷ್ಯ ನುಡಿಯುವ ಅರಸೀಕೆರೆ ಕೋಡಿಮಠದ ಶ್ರೀಗಳು, ಈಗ ರಾಜ್ಯ ಸರ್ಕಾರದ ಈಗಿನ ಭವಿಷ್ಯದ ಬಗ್ಗೆ ಮಾತನ್ನಾಡಿದ್ದಾರೆ.

ಹಾಸನದ ಮಾಡಾಳು ಗೌರಮ್ಮನ ಪ್ರತಿಷ್ಠಾಪನೆ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಸಹೋದರರಿಂದಲೇ ರಾಜ್ಯ ಸರ್ಕಾರಕ್ಕೆ ಕಂಟಕ ಕಾದಿದೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ನವೆಂಬರ್​ವರೆಗೆ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿರುತ್ತದೆ. ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ ನೋಡುತ್ತಿರಿ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಪ್ರಾಕೃತಿಕ ವಿಕೋಪಗಳು ಇನ್ನೂ ಹೆಚ್ಚಾಗಲಿವೆ. ಭೂ-ಕಂಪನದ ಹೊಡೆತಕ್ಕೆ ಮಹಾ ನಗರಗಳು ತತ್ತರಿಸುತ್ತವೆ. ಸಾವು-ನೋವುಗಳ ಸರಣಿ ಹೆಚ್ಚಾಗಲಿದೆ. ರಾಜ್ಯದಲ್ಲಿಯೂ ಮಳೆಯ ಆರ್ಭಟ ಮುಂದವರಿಯಲಿದೆ. ಯಾರು ಭಕ್ತಿಯಿಂದ ನಡೆದುಕೊಳ್ಳುತ್ತಾರೋ ಅಂತವರಿಗೆ ಒಳ್ಳೆಯದೂ ಆಗುತ್ತದೆ ಎಂದಿದ್ದಾರೆ.

ಶ್ರೀಗಳ ಈ ಹಿಂದೆ ಹೇಳಿದ ಭವಿಷ್ಯದಂತೆ ದೇಶ ಹಾಗೂ ರಾಜ್ಯದಲ್ಲಿ ಮಳೆಯಿಂದ ಅನೇಕ ಸಾವು-ನೋವುಗಳು ಸಂಭವಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ