ವರದಕ್ಷಿಣೆ ಕಿರುಕುಳ ಗೃಹಣಿ ಆತ್ಮಹತ್ಯೆ

ಹುಬ್ಬಳ್ಳಿ- ವರದಕ್ಷಿಣೆ ಕಿರುಕುಳದಿಂದ ಬೆಸತ್ತು ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿ ಜಾಲಿಹಾಳ (19) ನೇಣಿಗೆ ಶರಣಾದ ಗೃಹಿಣಿ. ಮೂರು ತಿಂಗಳ ಹಿಂದೆ ಯಲ್ಲಪ್ಪ‌ ಎಂಬುವನ ಜೊತೆ ಮದುವೆ ಮಾಡಿಕೊಡಲಾಗಿತ್ತು. ಮನೆಯಲ್ಲಿಯೇ ನೇಣು ಹಾಕಿಕೊಂಡ ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಗಂಡನ ಮನೆಯವರು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಯುವತಿಯರ ಪೋಷಕರು ಆರೋಪಿಸಿದ್ದಾರೆ. ತವರು ಮನೆಯಿಂದ ವರದಕ್ಷಿಣೆ ತರಬೇಕು. ಹೊಸ ಬೈಕ್. ಕೊಡೆಸಬೇಕೆಂದು ಗಂಡ ಯಲ್ಲಪ್ಪ ಪದೇ ಪದೇ ಪೀಡಿಸುತ್ತಿದ್ದ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದಂತೆ ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌ ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ