ಚಾಕು ತೋರಿಸಿ ಅಂಗಡಿಯಲ್ಲಿದ್ದ ಮಹಿಳೆಯನ್ನು ಬೆದರಿಸಿ 23 ಸಾವಿರ ಹಣ ದರೋಡೆ

ಬೆಂಗಳೂರು, ಸೆ.14- ತರಕಾರಿ ಕೊಳ್ಳುವ ನೆಪದಲ್ಲಿ ಅಂಗಡಿಗೆ ಬಂದ ದರೋಡೆಕೋರ ಚಾಕು ತೋರಿಸಿ ಅಂಗಡಿಯಲ್ಲಿದ್ದ ಮಹಿಳೆಯನ್ನು ಬೆದರಿಸಿ 23 ಸಾವಿರ ಹಣ ದರೋಡೆ ಮಾಡಿರುವ ಘಟನೆ ಸಿಕೆ ಅಚ್ಚುಕಟ್ಟು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬನಶಂಕರಿ 3ನೆ ಹಂತದಲ್ಲಿ ತರಕಾರಿ ಅಂಗಡಿ ಇದ್ದು, ಮಂಗಳವಾರ ಸಂಜೆ ಅಂಗಡಿಯಲ್ಲಿ ಮಹಿಳೆಯೊಬ್ಬರು ವ್ಯಾಪಾರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ತರಕಾರಿ ಕೊಳ್ಳುವ ನೆಪದಲ್ಲಿ ಬಂದ ದರೋಡೆಕೋರ ಈ ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಕ್ಯಾಷ್‍ಬಾಕ್ಸ್‍ನಲ್ಲಿದ್ದ 23 ಸಾವಿರ ಹಣ ತೆಗೆದುಕೊಂಡು ಪರಾರಿಯಾಗಿದ್ದಾನೆ.
ಈ ಬಗ್ಗೆ ಮುಸ್ತಾಕ್ ಅಹಮ್ಮದ್ ಎಂಬುವವರು ಸಿಕೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ದರೋಡೆಕೋರನಿಗಾಗಿ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ