ಅತಿ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವು

ಬೆಂಗಳೂರು, ಸೆ.14- ಅತಿ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಜಾಲಹಳ್ಳಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಾರು 25 ವರ್ಷದ ಯುವಕನಂತೆ ಕಾಣುವ ಬೈಕ್ ಸವಾರನ ಹೆಸರು-ವಿಳಾಸ ತಿಳಿದುಬಂದಿಲ್ಲ.
ಜಾಲಹಳ್ಳಿ ವಿಲೇಜ್‍ನ 4ನೆ ಕ್ರಾಸ್, ಬಾಹುಬಲಿ ನಗರದ ಮೂಲಕ ಈತ ಮಧ್ಯರಾತ್ರಿ 12 ಗಂಟೆ ಸಂದರ್ಭದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಗಂಭೀರ ಗಾಯಗೊಂಡನು.
ದಾರಿಹೋಕರು ತಕ್ಷಣ ಈತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈತನ ಹೆಸರು-ವಿಳಾಸ ತಿಳಿದುಬಂದಿಲ್ಲ.
ಶವವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿಡಲಾಗಿದೆ. ವಾರಸುದಾರರು ಜಾಲಹಳ್ಳಿ ಸಂಚಾರ ಪೆÇಲೀಸ್ ಠಾಣೆ ಸಂಪರ್ಕಿಸಲು ಕೋರಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ