ನಿರುದ್ಯೋಗದಿಂದ ಹತಾಶರಾದ ಯುವಕರಿಂದ ಅತ್ಯಾಚಾರ: ಬಿಜೆಪಿ ಶಾಸಕಿ ಹೇಳಿಕೆ

ಚಂಡಿಗಡ: ನಿರುದ್ಯೋಗ ಸಮಸ್ಯೆಯಿಂದಹತಾಶೆಗೊಂಡ ಯುವಕರಿಂದಾಗಿ ಅತ್ಯಾಚಾರದಂತ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಬಿಜೆಪಿ ನಾಯಕಿ ಹಾಗೂ ಹರ್ಯಾಣ ಶಾಸಕಿ ಪ್ರೇಮಲತಾ ಹೇಳಿದ್ದಾರೆ.

ಹರ್ಯಾಣದ ನಾರ್ನಾಲ್ ನಲ್ಲಿ 19 ವರ್ಷದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದು, ಸಮಾಜದಲ್ಲಿ ನಿರುದ್ಯೋಗದಿಂದ ಬೇಸತ್ತ ಯುವಕರು ಇಂಥಹ ಅಪರಾಧಗಳಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ರಿವಾರಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ, ಆಘಾತಕ್ಕೊಳಗಾಗಿದ್ದ ಆಕೆ ಸದ್ಯ ಚೇತರಿಸಿಕೊಳ್ಳುತ್ತಿದ್ದಾಳೆಎಂದು ಆಸ್ಪತ್ರೆ ಮಾಹಿತಿ ನೀಡಿದೆ ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ