ನೇಣು ಬಿಗಿದುಕೊಂಡು ಅತ್ಮಹತ್ಯೆ

ಬೆಂಗಳೂರು, ಸೆ.15-ಆರ್ಥಿಕ ಸಂಕಷ್ಟದಿಂದ ನೊಂದಿದ್ದ ಖಾಸಗಿ ಕಂಪೆನಿ ನೌಕರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕತ್ತರಗುಪ್ಪೆಯ ಒಂದನೇ ಮುಖ್ಯರಸ್ತೆ, 5ನೇ ಕ್ರಾಸ್ ನಿವಾಸಿ ಮುರಳಿ(36) ಆತ್ಮಹತ್ಯೆಗೆ ಶರಣಾದ ಖಾಸಗಿ ಕಂಪೆನಿ ನೌಕರ.
ಮುರಳಿ ಅವರ ಪತ್ನಿಯೂ ನೌಕರಿ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮುರಳಿ ಅವರು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ನಿನ್ನೆ ಮುರಳಿ ಅವರು ಕೆಲಸಕ್ಕೆ ಹೋಗಿರಲಿಲ್ಲ. ಮನೆಯಲ್ಲಿ ಒಬ್ಬರೇ ಇದ್ದರು. ಇವರ ಪತ್ನಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಪತ್ನಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

ಆರ್ಥಿಕ ಸಂಕಷ್ಟದಿಂದ ಹೊರಬರಲಾಗದೆ ನೊಂದಿದ್ದ ಮುರಳಿ ಆತ್ಮಹತ್ಯೆಗೆ ನಿರ್ಧರಿಸಿ ಸಂಜೆ 4 ಗಂಟೆಯಿಂದ ರಾತ್ರಿ 8ರ ಮಧ್ಯೆ ಫ್ಯಾನಿಗೆ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾತ್ರಿ ಪತ್ನಿ ಮನೆಗೆ ಬಂದಾಗಲೇ ಪತಿ ಮುರಳಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ವಿಷಯ ತಿಳಿದ ಸಿ.ಕೆ.ಅಚ್ಚುಕಟ್ಟು ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ