ಅಗತ್ಯಬಿದ್ದರೆ ಸಮನ್ವಯ ಸಮಿತಿ ಸಭೆ

ಬೆಂಗಳೂರು, ಸೆ.16- ಕಾಂಗ್ರೆಸ್‍ನಲ್ಲಿನ ಆಂತರಿಕ ಭಿನ್ನಮತ, ಅತೃಪ್ತ ಶಾಸಕರ ಅಸಮಾಧಾನ, ರಾಜಕೀಯ ಗೊಂದಲದ ಹಿನ್ನೆಲೆಯಲ್ಲಿ ಅಗತ್ಯವಾದರೆ ಸಮನ್ವಯ ಸಮಿತಿ ಸಭೆ ಕರೆಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿದೇಶ ಪ್ರವಾಸದಿಂದ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಇಲ್ಲ. ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಹೋದರರ ಸಮಸ್ಯೆ ಬಗ್ಗೆಯೂ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ವಾರಗಳ ಕಾಲ ವಿದೇಶ ಪ್ರವಾಸದಲ್ಲಿದ್ದುದರಿಂದ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಮಾಹಿತಿ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಂಪರ್ಕದಲ್ಲಿ ಆಡಳಿತ ಪಕ್ಷದ ಶಾಸಕರಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಅವರು ಸುಳ್ಳು ಹೇಳುತ್ತಿದ್ದಾರೆ ಎಂದ ಅವರು, ವಿದೇಶ ಪ್ರವಾಸ ಚೆನ್ನಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ