ಸಿಎಂ ವಿರುದ್ಧ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು, ಸೆ.18- ಬಿಜೆಪಿಯವರ ವಿರುದ್ಧ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡುವುದರಲ್ಲಿ ನೀವು ಯಾವುದರಲ್ಲಿ ಕಡಿಮೆ ಇದ್ದೀರಿ. ಇನ್ನೊಬ್ಬರ ವಿರುದ್ಧ ಮಾತನಾಡಲು ಯಾವ ನೈತಿಕತೆ ಇಟ್ಟುಕೊಂಡಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು.
ನಮ್ಮನ್ನು ಇಸ್ಪೀಟ್ ಆಡುವವರು, ಜೂಜುಕೋರರ ಸಂಪರ್ಕ ಇಟ್ಟುಕೊಂಡವರು ಎಂದು ಆರೋಪ ಮಾಡಿರುವ ನೀವು ಯಾರಿಗೆ ಕಮ್ಮಿ ಇದ್ದೀರ ಎಂದು ಗುಡುಗಿದರು.
ಗೌಡರ ಕುಟುಂಬ ಭೂ ಕಬಳಿಕೆ ಮಾಡಿದೆ ಎಂದು ಕಾಂಗ್ರೆಸ್‍ನ ಎ.ಮಂಜು ಆರೋಪ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸ್ಪಷ್ಟೀಕರಣ ನೀಡಬೇಕೆಂದು ಬಿಎಸ್‍ವೈ ಆಗ್ರಹಿಸಿದರು.
ಎ.ಮಂಜು ಆರೋಪದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಮೌನವಾಗಿದ್ದಾರೆ. ಕೂಡಲೇ ಈ ಬಗ್ಗೆ ಮಾತನಾಡಲಿ ಎಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ