ಕೆಎಸ್ ಪರಮೇಶ್ ರಸ್ತೆ ನಾಮಕರಣ

Varta Mitra News

ಬೆಂಗಳೂರು, ಸೆ.20-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಾಳೆ ರಾಜಾಜಿನಗರ ಆರಕ್ಷಕ ಠಾಣೆಯಿಂದ ದೀಪಕ್ ಕೋ-ಆಪರೇಟಿವ್ ಬ್ಯಾಂಕ್‍ವರೆಗೂ ದಕ್ಷ ಎಂಜಿನಿಯರ್ ಕೆಎಸ್ ಪರಮೇಶ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತಿದೆ.
ನಾಳೆ ಬೆಳಗ್ಗೆ 9.30ಕ್ಕೆದೀಪಕ್ ಕೋ ಆಪರೇಟಿವ್ ಬ್ಯಾಂಕ್ ಎದುರು ಈ ಕಾರ್ಯಕ್ರಮವನ್ನು ಶಾಸಕ ಎಸ್.ಸುರೇಶ್‍ಕುಮಾರ್ ಉದ್ಘಾಟಿಸಲಿದ್ದಾರೆ.
ಪಾಲಿಕೆ ಸದಸ್ಯ ಜಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಿದ್ವಾಯಿ ಆಸ್ಪತ್ರೆಯ ಡಾ.ಕೆ.ಪಿ.ಆರ್. ಪ್ರಮೋದ್ ಪಾಲ್ಗೊಳ್ಳಲಿದ್ದಾರೆ.
ಇಂಜಿನಿಯರ್ ಕ್ಷೇತ್ರದಲ್ಲಿ ಕೆ.ಎಸ್.ಪರಮೇಶ್ ಹೆಸರು ಜನಪ್ರಿಯ. ಅವರು ನೀಡಿದ್ದ ಕೊಡುಗೆ ಅಪಾರ. ಯೂನಿವರ್ಸಿಟಿ ಸ್ಕೂಲ್ ಆಫ್ ಆರ್ಕಿಟೆಕ್ಟರ್ ಆಗಿದ್ದ ಪರಮೇಶ್ ಅವರು ಕರ್ನಾಟಕ ಸರ್ಕಾರದಲ್ಲಿ ಅಸಿಸ್ಟೆಂಟ್ ಎಂಜನಿಯರ್‍ರಾಗಿ, ಸೂಪರ್ ಇಂಡೆಂಟಿಂಗ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ ಕೀರ್ತಿಗೆ ಭಾಜನರಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ