‘ಬ್ರೇಕ್’ ನಂತರ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆ!

ಕಿರಿಕ್ ಪಾರ್ಟಿ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಜೋಡಿಯ ಬ್ರೇಕಪ್ ನಂತರ ಇದೀಗ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಹೌದು, ರಕ್ಷಿತ್ ಶೆಟ್ಟಿ ಸದ್ಯ ಶ್ರೀಮನ್ನಾರಾಯಣ ಹಾಗೂ ಚಾರ್ಲಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ನಂತರ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ ನಿರ್ದೇಶಕ ಹೇಮಂತ್ ಎಂ ರಾವ್ ನಿರ್ದೇಶನದ ತೆನಾಲಿ ಚಿತ್ರದಲ್ಲಿ ರಕ್ಷಿತ್ ಅಭಿನಯಿಸಲಿದ್ದಾರೆ.
ಸದ್ಯ ರಕ್ಷಿತ್ ಶೆಟ್ಟಿ ಶ್ರೀಮನ್ನಾರಾಯಣ ಹಾಗೂ ಚಾರ್ಲಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದು ಹೇಮಂತ್ ರಾವ್ ಕವಲುದಾರಿ ಚಿತ್ರದಲ್ಲಿ ಬ್ಯುಸಿಯಾಗಿರುವುದರಿಂದ ಈ ಚಿತ್ರಗಳ ನಂತರ ತೆನಾಲಿ ಚಿತ್ರ ಸೆಟ್ಟೇರಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ